Thursday, October 11, 2018

ಹೊಸದು ಹೊಸೆದು ಹೊನ್ನಾಗಿಸಬೇಕು...


         ನಡೆದದಾ ದಾರಿಯಲಿ ನಡೆವ ರೋಮಾಂಚನವೆಲ್ಲಿ? ಹೊಸದಾರಿಯಲ್ಲಿ ಪುಳಕದ ಪುಗ್ಗವು ಊದಿಕೊಳ್ಳುವುದು. ಹಾಕಿದ ಹಳಿಗಳ ಮೇಲೆಯೇ ರೈಲು ಬಿಟ್ಟವರಿಗೆ ಹೊಸದು ಅರ್ಥವಾಗುವುದಾದರೂ ಹೇಗೆ? ಎಂದು ಕವಿ ಗೋಪಾಲಕೃಷ್ಣ ಅಡಿಗರು ತಮ್ಮ ಕವನದಲ್ಲಿ ಮಥಿಸಿದ್ದಾರೆ, ಕಥಿಸಿದ್ದಾರೆ.

ಏನೋ ಹೊಸದು ಮಾಡುವಲ್ಲಿ ಎಡವುದು ಸಹಜ. ಕಷ್ಟ ಕೋಟಲೆಗಳು ನೂರಾರು. ಅವನ್ನೆಲ್ಲಾ ಮೆಟ್ಟಿ ನಿಂತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಚ್ಚಟ್ಟು ಇಲ್ಲಿ ಈ ವರ್ಷ ಮಕ್ಕಳ ಅಜ್ಜಿಯಂದಿರಿಂದ ಸಂಗ್ರಹಿಸಿದ 'ಅಜ್ಜಿ ಮದ್ದು' ಎಂಬ ಕಿರು ಹೊತ್ತಗೆಯನ್ನು ಅನಾವರಣಗೊಳಿಸಲಾಯಿತು. ನಿವೃತ್ತ ಸಸ್ಯ ಶಾಸ್ತ್ರ ಉಪನ್ಯಾಸಕರಾದ ಶ್ರೀ ಅರವಿಂದ ಹೆಬ್ಬಾರ್ ಅವರು ಪತ್ರಿಕೆ ಪ್ರಾಯೋಜಿಸಿ ಅನಾವರಣಗೊಳಿಸಿ ಮಾತನಾಡಿದರು.



ಮಕ್ಕಳ,  ಶಿಕ್ಷಕರ ಪ್ರಯತ್ನದ ಕುರಿತು ಪ್ರಶಂಸೆಯ ಮಾತುಗಳನ್ನಾಡಿದರು. ಇನ್ನೂ ಹೆಚ್ಚಿನ ಸಂಚಿಕೆಗಳು ಹೊರ ಬರಲಿ ಎಂದು ಆಶಿಸಿದರು.

Monday, October 8, 2018

ಮಕ್ಕಳ ಮನ ಸೆಳೆದ ಜೇಡಗಳ ಛಾಯಾಚಿತ್ರ ಪ್ರದರ್ಶನ...

        ಹಕ್ಕಿ ಹಿಕ್ಕೆಯಂತೆ ಕಾಣುವ, ಚಪ್ಪಟೆ   ಹುಳದಂತಹ ಎಂಟು ತುದಿ ಹೊಂದಿರುವ, ಅಂಗಿ ಗುಂಡಿಯಂತಿರುವ,  ಕಿತ್ತಳೆ ಹಣ್ಣಿನಂತಿರುವ, 

ಅಳಿಲಿನ ಮರಿಯಂತಿರುವ ಜೇಡಗಳು. ಒಂದೊಂದು ಒಂದು ಬಗೆ. 

ಕೆಲವು ಮುದುಡಿ ಮಲಗಿದರೆ, ಕೆಲವು ಕೀಟಗಳ ಹಿಡಿದು ತಿನ್ನಲು ಕುಳಿತಿದ್ದವು. 

ಇನ್ನು ಕೆಲವು ಮತ್ತೊಂದು ಜೇಡವನ್ನು ತಿನ್ನಲು ಹಿಡಿದಿದ್ದವು. 
ಕೆಲವು ಎರಡು ಬಾಲದವು. ಕೆಲವು ಇರುವೆಯಂತಿರುವವು, ಆದರೆ ಇರುವೆಗಳಲ್ಲ! ಎಲ್ಲವೂ ಜೇಡಗಳು. ಬಲೆ ಹೆಣೆದು ಕಾದು ಕುಳಿತ ಕೆಲವು ಜೇಡಗಳ ಛಾಯಾಚಿತ್ರಗಳು. 
ಒಂದೊಂದು ಒಂದು ಬಣ್ಣ. ಕೆಲವು ನಿದ್ರಾವಸ್ಥೆಯಲ್ಲಿ. ಕೆಲವು ರಾತ್ರಿ ಶಿಖಾರಿಗೆ ಸಜ್ಜಾಗಿದ್ದವು. 
ಇವುಗಳ ಜೊತೆಗೆ ಒಂದಿಪ್ಪತ್ತು ಹಕ್ಕಿಗಳು. 


















ಹಲವು ಮಿಡತೆಗಳು, ಏರೋಪ್ಲೇನ್ ಚಿಟ್ಟೆಗಳು ಮತ್ತು ಅವುಗಳ ದೂರದ ಸಂಬಂಧಿ ಕೀಟಗಳು! ಇದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮಕ್ಕಳು ಕಣ್ತುಂಬಿಕೊಂಡ ದೃಶ್ಯ! ಮಕ್ಕಳ ಕಲ್ಪನೆಯಲ್ಲಿ ಹೊಸ ಹೂಗಳಂತೆ ಜೇಡಗಳು ಅರಳಿ ನಿಂತವು. 
ಎಲ್ಲಾ ಛಾಯಾಚಿತ್ರಗಳು ಶ್ರೀಧರ್ ಎಸ್. ಸಿದ್ದಾಪುರ ಅವರ ಕ್ಯಾಮರ ಕಣ್ಣಿಂದ ಮೂಡಿಬಂದಿತ್ತು.



ವಾರೆ ನೋಟ

ಲೋಚನ ದ ತುಂಬಾ ಚಂದ್ರ ತಾಲದ ಬಿಂಬ

( Chandra tal lake .... Himachal pradesh) ನೀಲಾಕಾಶದ ಭಿತ್ತಿಯಲಿ ಹೂ ಚೆಲ್ಲಿದಂತೆ ಹರಡಿದ ಮೋಡ. ರಸ್ತೆಯಲಿ ಅಜ್ಜನೊಬ್ಬ ಮಾತಿಗೆ ಅಂಟಿದ ಧೂಳನ್ನು ಉಜ್ಜುತ್ತಾ ಕುಳಿ...