Wednesday, March 11, 2026

ಸೋಲೆಂಬ ಅಲ್ಪ ವಿರಾಮದ ನಡುವೆ.

 

ತೇಜಸ್ವಿಯ ನೆನಪಿಗೆ ನಡೆಸಿದ ಮೂರು ದಿನಗಳ ಕರ‍್ಯಾಗಾರದಲ್ಲಿ ನನ್ನ ಚಿತ್ರ ಪಟ ಕಥನ ಓದಲಿತ್ತು. ಹೇಗೂ ಹೊರಟಿದ್ದೆನಲ್ಲಾ ಎಂದು ಕೊಂಡು ದೇವರ ಮನೆಯಿಂದ ಅನತಿ ದೂರದ ನಾಣ್ಯ ಭೈರವನಿಗೂ ನಮಿಸೋಣ ಎಂದುಕೊಂಡು ಹೊರಟಿದ್ದೆ. ಒಂದಿಷ್ಟು ಹೊಸ ಲೇಖಕರು ಅಲ್ಲಿದ್ದರು. ಹೊಸಬರ ಪರಿಚಯವಾಯಿತು. `ಹೋಮ್'  ಸಾಕ್ಷಚಿತ್ರಕ್ಕೆ ದನಿಯಾದ ಈಶ್ವರ್‌ ಪ್ರಸಾದ ಬಂದಿದ್ದರು! ಏನೇನೋ ಪುಂಗುತಲಿದ್ದರು! ಜೊತೆಗೆ ತಮ್ಮ ಅನುಭವ ಸಾರವನ್ನು ಅರಹುತ್ತಿದ್ದರು!



ಭೈರವನಿಗೆ ನಮಿಸೋಣವೆಂದು ಹೊರಡೋಣವೆಂದರೆ ಪುರುಸೊತ್ತೇ ಆಗದಷ್ಟು ಕಾವ್ಯ ಮಳೆ! ಭೈರವನಿಗೂ ನಮ್ಮ ಮೇಲೆ ಮುನಿಸಿರಬೇಕು! ಬಿಡುವೇ ಆಗದೇ ಹಿಂದಿರುಗಿದೆ. ದೇವರ ಮನೆಯ ಸ್ನೇಹಿತ ಯಾವಾಗ ಬರುತ್ತಿ ಎಂದು ನೆನಪಿಸುತ್ತಲೇ ಇದ್ದ ಹೋಗಲಾಗಲಿಲ್ಲ.

ನಾಣ್ಯ ಭೈರವ

ನಾಣ್ಯ ಭೈರವ ದೇವಾಲಯ.


ಎತ್ತಿನ ಭುಜದ ಪದತಲದಲ್ಲಿ  ವಿರಮಿಸಿದ ನಾಣ್ಯ ಭೈರವನನ್ನು 13ನೆಯ ಶತಮಾನದಲ್ಲಿ ನಿರ್ಮಿಸಲಾಗಿದೆ. ಕರ್ನಾಟಕದಾದ್ಯಂತ ಕಾಲ ಭೈರವನ ಹೊರತು ಪಡಿಸಿದರೆ ಭೈರವನ ದೇವಾಲಯ ಬಲು ಅಪರೂಪ. ಇಂತಹ ಭೈರವನ ದೇವಾಲಯಗಳಲ್ಲಿ ನಾಣ್ಯ ಭೈರವನೇ ವಿಶಿಷ್ಟವಾದ ಹೆಸರು. ಇವನಿಂದಲೇ ಈ ಊರಿಗೆ ಭೈರಾಪುರವೆಂಬ ಹೆಸರು. ಭೈರವ ಪುರದಿಂದ ಭೈರಾಪುರವಾಗಿರಬೇಕು. ನಾಣ್ಯ ಭೈರವೇಶ್ವರ ಹೊಯ್ಸಳರ ಕಾಲದಲ್ಲಿ ಅತ್ಯಂತ ಪ್ರಮುಖ ಪಟ್ಟಣವಾಗಿತ್ತು. ಇಲ್ಲಿಯೇ ಟಂಕಸಾಲೆಯಿತ್ತು ಎಂಬುದಕ್ಕೆ ನಾಣ್ಯ ಭೈರವ ದೇವಾಲಯವೇ ಸಾಕ್ಷಿ. ಕೋಟೆ ಕೊತ್ತಲಗಳಿದ್ದ ಭೈರಾಪುರಕ್ಕೀಗ ಸನ್ಯಾಸ. ಅಜ್ಞಾತವಾಗಿ ಎರಡು ಜಿಲ್ಲೆಗಳ ನಡುವಿನ ಗರುಡಗಂಬದಂತಿದೆ. ಇತಿಹಾಸದ ಹೆಜ್ಜೆ ಗುರುತುಗಳನ್ನು ಬಿಡದೇ ಅಳಿಸಿಕೊಂಡು ಸ್ಮಶಾನ ವೈರಾಗಿಯಂತೆ ನಿಂತ ದೇವಾಲಯ! ಇದಕ್ಕೂ ನಮಗೂ ಸಂಬಂಧವೇ ಇಲ್ಲದಂತೆ ಬದುಕ ಬಂಡಿ ಎಳವ ಮಂದಿ! 



ಹೆಜ್ಜೆ ೧



               ಆಸಾಡಿಯ ಒಡ್ರು ಮಳೆ ಮುಗಿದು ಸ್ವಾತಿಯ ಸೋನೆ ಶುರುವಾಗಿದ್ದೇ ಗೆಳೆಯ ಮತ್ತು ನಾಣ್ಯ ಭೈರವನ ನೆನಪಾಯಿತು! ನಾಣ್ಯ ಭೈರವನೊಂದಿಗೆ ತಳುಕಿ ಹಾಕಿ ಆತನ ರಕ್ಷಣೆಗೆ ನಿಂತಂತೆ ಕಾಣುವ ಎತ್ತಿನ ಭುಜವೆಂಬ ಅಭೂತಪೂರ್ವ ವಿಶಿಷ್ಟ ಚಾರಣ ಮಾಡುವ ನೆನಪಾಗಿ ಹೊರಟು ನಿಂತಿದ್ದೆ. ಮಳೆ  ನಿಂತು ದಿನಕ್ಕೊಂದೊ ಎರಡೋ ಸೋನೆ ಸುರಿಸಿ ಹೋಗುತ್ತಿದ್ದ ಸಮಯ. ನಾವು ಸಂಜೆಯ ಚಹ ಹೀರಿ ಹೊರಟು ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಇಳಿದೆವು.



ತೇಜಸ್ವಿ ಮನೆ ಇಲ್ಲಿಂದ ಮಾರು ದೂರ. ಅವರ ತೋಟ ಗದ್ದೆ ತಿರುಗಿದ ನೆನಪುಗಳು. ರಾಜೇಶ್ವರಿಯವರು ಮಾಡಿಕೊಟ್ಟ ಚಹ. ಅವರ ಮನೆಯಂಗಳದ ಹಕ್ಕಿ ಚಿಲಿಪಿಲಿ, ಸ್ಕೂಟರ್, ನಿಂತ ಗಡಿಯಾರದ ಮೆಲುಕು ಹಾಕುತ್ತಾ ಹೊರಟೆವು. ಅಲ್ಲಿಗೆ ಭೇಟಿ ಇತ್ತ ನೆನಪು ದಾರಿಯುದ್ದಕ್ಕೂ ಹಸಿರು.



        ಎರಡು ಜಿಲ್ಲೆಗಳ ಗಡಿಯ ಗರುಡ ಗಂಬದಂತಿರುವ ಎತ್ತಿನ ಭುಜವನ್ನು ಶಿಶಿಲಾ ಧರ್ಮಸ್ಥಳ ಕಡೆಯಿಂದಲೂ ಏರಬಹುದು. ಶಿಶಿಲ ಕಡೆಯ ಕಠಿಣ ದಾರಿ ತೊರೆದು ಸುಲಭದ ಮೂಡಿಗೆರೆಯ ಹಾದಿ ಹಿಡಿದೆವು. ಎತ್ತಿನ ಭುಜ ದಂತಿರುವ ವಿಶಿಷ್ಟ ಚಾರಣ ದಾರಿ. ಜೇನು ಕಲ್ಲು ಗುಡ್ಡದ ನೆತ್ತಿಯಿಂದ ಒಮ್ಮೆ ನೋಡಿದ್ದೆ. ತನ್ನ ಅಪೂರ್ವ ನೋಟವನ್ನು ತೋರಿ ಮಿಡುಕಿತ್ತು. ತನ್ನ ವಿಶಿಷ್ಟ ಮೋಹಕತೆಯಿಂದ ಸೆಳೆದಿತ್ತು.

ಎತ್ತಿ ಭುಜ - ಚಿತ್ರ ಕೃಪೆ ಅಂತಜಾ೯ಲ.


ತೇಜಸ್ವಿ ಊರಾದ ಇಲ್ಲಿ ರಾತ್ರಿಯೂಟಕ್ಕೆ  ಯಾವಗಲೂ ತತ್ವಾರ. ಯಾವುದೋ ಗಲ್ಲಿಯಲ್ಲಿ ಸಿಕ್ಕ ಅಕ್ಕಿ ರೊಟ್ಟಿಯ ಪುಟಾಣಿ ಹೋಟೆಲಿನಲ್ಲಿ ಉಳಿದ ನಾಲ್ಕೇ ನಾಲ್ಕು ರೊಟ್ಟಿ ಹಂಚಿಕೊಂಡು ಹೊಟ್ಟೆಗಿಳಿಸಿ ಬಂದು ದಿಂಬಿಗೊರಗಿದೆವು.

ಹೊಸತೊಂದು ಚಾರಣದ ಅನುಭವವಾಗುತ್ತದೆಂದು ಅಂದು ಅಂದಾಜಿರಲಿಲ್ಲ. ನಾವಂತೂ ಸಣ್ಣ ಸಣ್ಣ ಚಾರಣಗಳನ್ನು ಪೂರ್ಣಗೊಳಿಸದೇ ಬಂದುದೇ ಇಲ್ಲ. ಹರಕಿ ದುನ್‌, ಕಾಶ್ಮೀರದ ಸರೋವರ ಮುಂತಾದ ಚಾರಣಗಳನ್ನು ಆಯಾಸವಿಲ್ಲದೇ ಪೂರ್ಣಗೊಳಿಸಿದ ನಮ್ಮ ಗೆಲುವಿನ ಎನ್‌ಸೈಕ್ಲೋಪಿಡಿಯಾದ ಒಂದು ವಿಶಿಷ್ಟ ಅಧ್ಯಾಯ!

****

            ಸದಾ ಗೆಲ್ಲುತ್ತಿರುವವನಿಗೆ ಆಗಾಗ ಸೋಲುಗಳು ಸಿಗಬೇಕು. ಸದಾ ಗೆಲ್ಲುತ್ತಿದ್ದರೆ ಗೆಲುವಿನ ರುಚಿ ತಿಳಿಯದು. ನಮ್ಮ ಅಹಂಕಾರದ ಬಲೂನಿಗೆ ಅರಿವಿನ ಸೂಜಿಯನು ಆಗಾಗ ಚುಚ್ಚುತ್ತಿರಬೇಕು. ಇಲ್ಲವಾದರೆ ನಾವೇ ದೇವರಾಗಿ ಬಿಡುವ ಅಪಾಯವಿದೆ ಎನ್ನುತ್ತಾರೆ ಕವಿ ಗೋಪಾಲ ಕೃಷ್ಣ ಅಡಿಗರು. ಕಷ್ಟ ಕಾಲದಲ್ಲೇ ನಮ್ಮ ಸಂಪೂರ್ಣ ಸಾಮರ್ಥ್ಯ ಹೊರಬರುವುದು. ನಮ್ಮ ಮೇಲಿನ ಬೃಹತ್‌ ನಂಬಿಕೆಯ ಬೆಟ್ಟವನ್ನು ಬಲಪಡಿಸುವುದು ಇಂತಹ ಪುಟಾಣಿ ಚಾರಣಗಳು. ಅಲ್ವೇ?! ಅಂತಹದೊಂದು ಅನುಭವ ನಿಮ್ಮೊಂದಿಗೆ.

ಮುಂಜಾವಿನ ಮಂಜಿಗೆ ಮುತ್ತಿಡುತ್ತಾ…




ಕರೋನ ತುತ್ತ ತುದಿಯಲ್ಲಿದ್ದ ಕಾಲ ನಾವೊಂದು ಐದು ಜನ ಗೆಳೆಯರಿಗೆ ಹೇಗಾದರೂ ಮಾಡಿ ಎತ್ತಿನ ಭುಜವನ್ನು ಅಲುಗಾಡಿಸಿ ನೆತ್ತಿಯಲಿ ಭಾವುಟ ಹಾರಿಸಲು ಹೊರಟೆವು. ಗಡದ್ದಾಗಿ ತಯಾರಿಯೂ ನಡೆಸಿದ್ದೆವು. ಎರಡೆರಡು ರೈನ್‌ ಕೋಟ್‌ ಖರೀದಿಸಿದ್ದೆವು. ಬಲಾಡ್ಯ ಕೊಡೆಯೊಂದು ಜೊತೆಗಿತ್ತು.


ಹಸಿರ ದಾರಿಯಲಿ ನೆನಪುಗಳ ಮೆರವಣಿಗೆ

ಚುಮು ಚುಮು ಮುಂಜಾವಿನಲ್ಲಿ ಇಡ್ಲಿ ಮತ್ತು ಕಾಫಿಗೆ ಜಿಟಿ ಜಿಟಿ ಜೀರಿಗೆ ಮಳೆಯ ಅಲಂಕಾರ. ಈ ನಡುವೆ ನಮ್ಮ ರಥ ಎತ್ತಿನಭುಜದ ನೆತ್ತಿ ಸವರಲು ಹೊರಟಿತ್ತು. ಜೊತೆಗೆ ನಾಣ್ಯ ಬೈರವನ ಜೊತೆ ಸೇರುವ ಮಾತಾಗಿತ್ತು.





ನಿನ್ನೆಯ ಮಳೆಗೆ ತೊಳೆದಿಟ್ಟಂತಹ ರಸ್ತೆಯಲ್ಲಿ ನಡುದಾರಿಗೆ ಬರುತ್ತಲೇ ಹನಿ ಮಳೆಯ ಸಿಂಚನ ಶುರುವಿಟ್ಟುಕೊಂಡಿತು. ದಾರಿ ನಡುವೆ ಮಂಡಾಳೆ ಹೊತ್ತ ಒಂದಿಷ್ಟು ಹಳ್ಳಿಗರು ತುಟಿ ಕೆಂಪಾಗಿಸಿಕೊಂಡು, ಮಂದಸ್ಮಿತವಾಗಿ ಒಬ್ಬರಿಗೊಬ್ಬರು ಕಾಲೆಳೆದುಕೊಳ್ಳುತ್ತಾ  ಎಲ್ಲಿಗೋ ಮಳೆಯಲ್ಲಿ ನಡೆದು ಹೋಗುತ್ತಿದ್ದರು. ಅವರ ಗೊರಬು ನನ್ನನ್ನು ಬಾಲ್ಯಕ್ಕೆ ಮರಳಿಸಿತು.



       ಕಂಬಳಿಯಿಂದ ತಯಾರಿಸಿದ ಗೊರುಬುಗಳು ಈಗ ಮಾಯವಾಗಿ ಪ್ಲಾಸ್ಟಿಕ್‌ನದ್ದಾಗಿದೆ. ಮೊದಲದಕ್ಕೆ ಅಪ್ಪನ ಬೆವರಿನ ನಂಟಿತ್ತು. ತನ್ನ ಮೊದಲಿನ ಆಪ್ತತೆಯ ಚುಬುಕಿತ್ತು. ಅಪಾರ ನೆನಪಿನ ಚಿತ್ತಾರವಿತ್ತು. ಅವರ ಬಳಿ ಕಷ್ಟ ಸುಖ ವಿಚಾರಿಸಿ, ಕವಳ ಕೇಳಿ ಪಡೆದು ಜಗಿದು, ಎತ್ತಿನ ಭುಜದ ದಾರಿ ಕೇಳಿ ಅವರನ್ನು ಬೀಳ್ಕೊಟ್ಟೆವು!

-


             ಇಕ್ಕೆಲಗಳಲ್ಲಿ ಕರ್ಣ ಕುಂಡಲಗಳು ಈಗಷ್ಟೇ ಸೂರ್ಯ ರಶ್ಮಿಗಾಗಿ ಕಾದು ನಮ್ಮ ನೋಡಿ ನಗುತಲಿದ್ದವು. ಪುಟಾಣಿ ಮಕ್ಕಳು ತಮ್ಮ ಕಿವಿಗೆ ಜೋತು ಬಿದ್ದ ಅಶ್ವಥದೆಲೆಯ ಆಭರಣದಂತೆ ಗಿಡಗಳು ಪುಟಾಣಿ ಹೂ ತೊಟ್ಟು ನಿಂತಿದ್ದವು. ನಾವು ಪುಟಾಣಿಗಳಿದ್ದಾಗ ಸ್ಲೇಟು ಉಜ್ಜಲು ಇದರ ಇನ್ನೊಂದು ಜಾತಿಯನ್ನು ಬಳಸುತ್ತಿದ್ದದು ನೆನಪು. ದಾರಿಯುದ್ದಕ್ಕೂ ಬಾಲ್ಯದ ನೆನಪುಗಳ ಮೆರವಣಿಗೆ. ಬಹಳ ದಪ್ಪವಾಗಿದ್ದ ಆ ತಳಿ ಈಗಿಲ್ಲ! ಅಳಿದವಿರಬೇಕು. ಯಾರ ಕಾಕ ದೃಷ್ಟಿ ಬಿತ್ತೋ.

                  ಮೂಡಿಗೆರೆ ಬಿಟ್ಟ ಕ್ಷಣದಿಂದ ಸೋನೆಯಂತೆ ಸುರಿದು ಚಾರಣಕ್ಕೆ ಸಂಭ್ರಮದ ಹಚ್ಚೆ ಹಚ್ಚುತಲಿದ್ದ ಮಳೆ. ಮಾಲಕೌಂಸ್‌ ರಾಗ ಹಚ್ಚಿ ಹಾಡ ತೊಡಗಿತು. ಎತ್ತಿನ ಭುಜ ಬರುತ್ತಲೇ ಉಸಿರ ಕಟ್ಟಿದ ಮಕ್ಕಳಂತೆ ಮಳೆಯ ರಚ್ಚೆ. ಯಾರ ಮೇಲಿನ ಸಿಟ್ಟೋ ಏನೋ. ಬೆಟ್ಟದ ಭೈರವನ ಪೂಜಾರಿಯ ಜೊತೆಯಿರಬೇಕು. ದಿನವೂ ಕಲ್ಲಂತಹ ಕಲ್ಲಿಗೆ ನೈವೇಧ್ಯ ಕೊಡುವಾತ ಯಾಕೆ ತನಗಿಲ್ಲವೆಂಬ ಸಿಟ್ಟಿರಬೇಕು. ಅಥವಾ ಹೆಂಡತಿಯೊಂದಿಗೆ ಜಗಳ ಕಾದು ನಮಗೆ ಹೀಗೆ ಸತಾಯಿಸಿದನೋ ಹೇಗೆ? ಎಂಬ ಗುಮಾನಿ.

ಮಳೆಯ ಶಿವತಾಂಡವ



        ಬೈರವನ ಗುಡಿಗುಂಟ ಸಾಲು ಸಾಲು ಎಲ್ನೋಡಿ ಕಾರು. ಭೈರವ ಗುಡಿಯ ಅರ್ಚಕರನ್ನು ಮಾತಾಡಿಸಿ ಪ್ರಸಾದ ಪಡೆದು ಬೆಟ್ಟದ ಭೈರವನಿಗೆ ಸುತ್ತು ಬಂದು ಪ್ರಾರ್ಥಿಸಿ ನಮ್ಮ ಚಾರಣ ಸುಖಕರವಾಗಿರಲಿ ಎಂದು ಬೆಟ್ಟವೇರಲು ಸಜ್ಜಾದೆವು. ಭಟ್ಟರ ಮೊಬೈಲ್‌ ಸಂಖ್ಯೆ ನಮ್ಮ ಮೊಬೈಲೊಳಗೆ ಸೇರಿಕೊಂಡಿತು.



ಕಷ್ಟ ಪಟ್ಟು ಹಾಗೂ ಹೀಗೂ ಬಂದ ಭೈರವೇಶ್ವರ ಗುಡಿಯ ಪೂಜಾರಿ  ಮಳೆ ನಿಲ್ಲಲ್ಲಿ ಎಂಬಂತೆ ಮಹಾ ಮಂಗಳಾರತಿ ಎತ್ತಿದರು. ಮಂಗಳಾರ
ತಿ ಎತ್ತಿದ್ದೆ ಎಲ್ಲಿತ್ತೊ ಕುಂಬ ದ್ರೋಣ ಮಳೆ ಹೊಡೆತ. ಗುಡುಗು ಸಿಡಿಲಿನೊಂದಿಗೆ ಮತ್ತೆ ಮಳೆ ದೇವಾಲಯದ ಗಂಟೆಯೊಂದಿಗೆ ಜುಗುಲ್‌ ಬಂದಿಗೆ ಇಳಿಯಿತು. ಗಂಟೆಯ ಶಬ್ಧವೆಲ್ಲಾ ಮಳೆಯ ನೀರಲಿ ಕರಗಿ ಹಳ್ಳ ಕೊಳ್ಳಗಳಲ್ಲಿ ಹರಿಯತೊಡಗಿತು. ಮನಸ್ಸುಗಳೆಲ್ಲಾ ಥಂಡಿ ಥಂಡಿ!

ನಿರಾಸೆಯ ಮೂಡಿಸಿದ ನೀಲ ಕುರುಂಜಿ

              ಈ ವರ್ಷವೇ ನೀಲ ಕುರುಂಜಿ/ನೀಲ ಕಾವರಿ ಹೂವುಗಳು ಅರಳಬೇಕಾಗಿರುವುದರಿಂದ ಸುತ್ತಲೂ ಕಣ್ಣರಳಿಸಿದೆ. ಮಳೆ ಪ್ರಾಕೃತಿಕ ವಿಕೋಪ ಮುಂತಾದ ಕಾರಣಗಳಿಂದ ಅರಳದೇ ಸುಪ್ತಾವಸ್ತೆಯಲ್ಲಿ ಉಳಿದು ನಮ್ಮನ್ನು ಸತಾಯಿಸಿತು. 2009ರಲ್ಲೊಮ್ಮೆ ಅರಳಿದಾಗ ಬರಬೇಕೆಂಬ ಬಯಕೆ ಇದ್ದರೂ ಬರಲಾಗಲಿಲ್ಲ. ಅಲ್ಲಲ್ಲಿ ತಡಕಾಡಿದರೂ ಕಾಣದ ಕುರುಂಜಿ. ಗಾಳಿಗುಡ್ಡ ಚಾರಣಕ್ಕೆ ಹೋದಾಗ ಒಂದೆರಡು ಕಂಡಿದ್ದೇ ಕೊನೆ ಮತ್ತೆಲ್ಲೂ ಕಂಡಿದಿಲ್ಲ. ಮತ್ತೆ ಕಂಡಿದ್ದು ಬಾಬಾ ಬುಡನ್‌ ಗಿರಿಯಲ್ಲಿ. ಎಲ್ಲಾ ಸರಿ ಇದ್ದರೆ ಇನ್ನು ದರ್ಶನ ೨೦೩೫ಕ್ಕೆ.



                 ಹುಚ್ಚು ಮಳೆಯಲ್ಲಿ ಹೆಜ್ಜೆ ಇಟ್ಟಿದ್ದೆವು. ಮಳೆ ತನ್ನ ರೌದ್ರ ರೂಪವನ್ನು ತೋರ ಹತ್ತಿತ್ತು. ಜೀವ ಮಾನದ ಮಹಾ ಮಳೆಯೊಂದು ನಮ್ಮ ನೆನಪಿನ ಪುಟಗಳಲ್ಲಿ ದಾಖಲಾಯಿತು. ಹೊರಗಿನ ನೋಟವಾಗಲಿ ನಮ್ಮ ತಂಡದವರೇ ನಮಗೆ ಕಾಣಿಸುತ್ತಿರಲಿಲ್ಲ. ಹಾಗಾಗಿ ನಿಧಾನವಾಗಿ ಒಬ್ಬರ ಹಿಂದೆ ಒಬ್ಬರು ರೈಲು ಬೋಗಿಗಳಂತೆ ಸಾಗುತ್ತಿದ್ದೆವು. ನೆತ್ತಿಯಿಂದ ಕನಿಷ್ಠ ದೂರದಲ್ಲಿದ್ದೆವು. ಅಸಾಧ್ಯ ಮಳೆ. ಕೊಡೆ, ರೈನು ಕೋಟುಗಳೊಳಗೆಲ್ಲಾ ನೀರ ಕಾರು ಬಾರು. ಎರಡೂ ಕಡೆ ಮಹಾ ಕಣಿವೆ. ನೇರ ಗೆರೆ ಎಳೆದಂತಹ ದಾರಿ ಇದ್ದರೂ ಮಳೆ ಹೊಡೆತಕ್ಕೆ ಸಿಕ್ಕಿ ೨ ಅಡಿಯ ಮುಂದೇನಿದೆ ಎಂದು ಗೋಚರವಾಗುತ್ತಿರಲಿಲ್ಲ. ನೆತ್ತಿಗೆ ನೂರು ಹೆಜ್ಜೆಯಷ್ಟೇ ಬಾಕಿ. ಎಡ ಬಲದ ನಡುವೆ ಸಣ್ಣ ಗೆರೆಯಂತಹ ದಾರಿಗೆ ಹುಲ್ಲು ಹಾಸು ಹಾಸಿತ್ತು. ಸುಮಾರು ೭೫ ಡಿಗ್ರಿ ಕೋನದಲ್ಲಿ ಲಂಬಿಸಿದ ದಾರಿ ನಮಗೀಗ ಸಾಕ್ಷಾತ್‌ ವೈಕುಂಠದ ಹೆದ್ದಾರಿಯಂತೆ ಭಾಸ.

                      ಕೊಡೆಯೊಂದಿಗೆ ಪ್ಯಾರಾ ಚೂಟ್ ಆಗಿ ಕೆಳಗಿನ ಶಿಶಿಲಕ್ಕೊ ಧರ್ಮಸ್ಥಳದಲ್ಲೋ ಶಿವೈಕ್ಯವಾಗುವುದರಲ್ಲಿ ಜಸ್ಟ್‌ ಮಿಸ್!‌ ಇನ್ನೇನು ಕೈಗೆಟಕುವ ದೂರದಲ್ಲಿದೆ ನೆತ್ತಿ ಆದರೂ ಕಾಣಿಸುತ್ತಿರಲಿಲ್ಲ. ಸುಮಾರು 75 ಡಿಗ್ರಿ ಕೋನದಲ್ಲಿ ವಾಲಿಕೊಂಡ ಮಣ್ಣು ದಾರಿ. ತೋರುತ್ತದ್ದೋ ಇಲ್ಲವೋ ಎಂಬಸ್ಟೇ  ತೆರೆದುಕೊಂಡ ದಾರಿ. ನೆತ್ತಿ ಕಾಣದ ಅನಾಥ ಅನಂತದಲ್ಲಿ ಲೀನವಾದ ದಾರಿ. ಬೇರೆಲೋಕಕ್ಕೆ ಮಾಯವಾದಂತೆ ಭಾಸ. ಹಿಡಿದ ಕೊಡೆ ಗಾಳಿಗೆ ತೂರತೊಡಗಿತು. ಮಸಲ ಧಾರೆ. ಗುಡ್ಡ ಕುಸಿಯುವಷ್ಟು ಮಳೆ. ಜೀವ ಇದ್ದರೆ ಬೆಲ್ಲ ಬೇಡಿ ಬದುಕಿಯೇನು. ಈ ಗಾಳಿಯ ಸಹಿಸಲು ಸಾಧ್ಯವಿಲ್ಲ ಎಂಬಷ್ಟು ಗಾಳಿ. ಗಾಳಿಯ ಶಿವ ತಾಂಡವ! ಇಳಿಯತೊಡಗಿದೆವು. ಮಳೆಯೂ ನಮ್ಮೊಂದಿಗೆ ಇಳಿಯದೇ ಏರತೊಡಗಿತು. ಪ್ರಳಯ ರುದ್ರದಂತಹ ಮಳೆ.

ಈ ಜನ್ಮದಲ್ಲಂತು ಇಂತಹ ಬೀಕರ ಮಳೆ ಕಂಡಿದ್ದು ಇಲ್ಲಾ!! ಕೆಳಗಿಳಿಯುತ್ತಾ ಜೀವಾದಿಗಳು ತಲ್ಲಣಿಸುತ್ತಿದ್ದವು. ತರಗಲೆಗಳ ತೂರಾಟ, ಹನಿಗಳ ಆರ್ಭಟ. ಕೆಳಗಿಳುತ್ತಲೇ ಮಳೆ ಕಡಿಮೆ ಆಗುವುದನ್ನೇ ತಲೆಗೊಂದು ಸೂರು ಹುಡುಕಿ ಹೊರಟೆವು. ಅಷ್ಟು ಮಳೆಯಲ್ಲೂ ಒಂದೆರಡು ಚಿತ್ರ ತೆಗೆದುದರಿಂದ ಎಲ್ಲರಿಗಿಂತ ಹಿಂದುಳಿದಿದ್ದ ನಾನು ಸ್ನೇಹಿತರಿಗಾಗಿ ಹುಡುಕಿದೆ. ಯಾರೂ ಕಾಣಲಿಲ್ಲ. ಭಟ್ಟರ ಹಿಂದೇ ಹೋದರೋ ಹೇಗೆ? ಭೈರವನಿಗೆ ಪೂಜೆ ಮುಗಿಸಿ ಭಟ್ಟರು ಆಗಲೇ ಹೋಗಿಯಾಗಿತ್ತು. ಭೈರವನ ಗುಡಿಯಲ್ಲಿ ಅಡಗುವ ಆಸೆ ಬಿಟ್ಟೇವು. ಸನಿಹದಲ್ಲೇ ಚಿಕ್ಕ ಗುಡಿಸಿಲಿನಂತಹ ಮಾಡಿತ್ತು. ಕಳ್ಳರಂತೆ ಅಲ್ಲಿ ಅಡಗಿಕೊಳ್ಳಲು ಹೊರಟೆ. ಗೆಳೆಯರೆಲ್ಲ ಅಲ್ಲೇ ಅಡಗಿ ಕುಳಿತ್ತಿದ್ದರು! ಒಬ್ಬರಿಗೊಬ್ಬರು ಒತ್ತಿ ನಿಂತು ಚಳಿ, ಮಳೆಯನ್ನು ಅನುಭವಿಸುತ್ತಾ ನಿಂತೆವು.

ರಕ್ತ ಪರೀಕ್ಷಕರು

                  ಜಿರಾಪತಿ ಮಳೆಯ ನಡುವೆ ಕಾಲಿಗೇನು ಏರಬಾರದೆಂದು ಪ್ಲಾಸ್ಟಿಕ್‌ ಕವರ್‌ ಹಾಕಿಕೊಂಡು ಬಂದವರಿಗೆ ತಕ್ಕ ಪಾಠ ಕಲಿಸಿದ ರಕ್ತ ಪರೀಕ್ಷಕ ಜಿಗಣೆಗಳು ಎಲ್ಲೆಲ್ಲಿಗೂ ನುಸುಳಿ ತನ್ನ ಪಾರುಪತ್ಯ ತೋರಿತ್ತು! ಕೆಲವರು ತಮ್ಮ ಮರ್ಮಾಂಗವನ್ನೆಲ್ಲಾ ಪರೀಕ್ಷೆ ಮಾಡಿಕೊಳ್ಳುತಲಿದ್ದರು! ಲೀಟರ್‌ ಗಟ್ಟಲೇ ರಕ್ತದಾನ ಮಾಡಿದ ನಂತರ ನಾವು ನಶ್ಯಾದ ಭರ್ಜರಿ ಸನ್ಮಾನ ಮಾಡಿದೆವು. ಕೊಂಚ ಖುಷಿ ಪಟ್ಟು, ಪಟ್ಟು ಸಡಿಲಿಸಿ ಉದುರಿದವು. ನಶ್ಯಾದ ಅಪರಿಮಿತ ಶಕ್ತಿಗೆ ಮನಸೋತೆ. ಯಕಶ್ಚಿತ್ ಜೀವಿಯೊಂದು ಜೀವ ವಿಸ್ಮಯವಾಗಿ ಕಂಡಿತು. ಅಬ್ಬಾ! ಇದರ ಪ್ರತಾಪವೇ ಎನಿಸಿತು. ತನ್ನ ಮೂತಿಯಿಂದಲೇ ನಡೆಯುತ್ತಾ ಬಿಸಿ ರಕ್ತ ಜೀವಿಗಳ ರಕ್ತ ಹೀರುವ ರಕ್ತ ಪೀಪಾಸುಗಳು. ಮರ, ಗಿಡ-ಗಂಟಿ ಮತ್ತು ಮನುಷ್ಯನಿಗೂ ವ್ಯತ್ಯಾಸವನ್ನು ಕ್ಷಣದಲ್ಲೇ ಗುರುತಿಸಬಲ್ಲದು! ತನ್ನ ಅಂಗಾಂಗಗಳ ಮೂಲಕ ಬಿಸಿ ರಕ್ತ ಪ್ರಾಣಿಗಳ ಬಿಸಿ, ಮೈಯ ಎಣ್ಣೆ, ನೆರಳು ಮತ್ತು ರಾಸಾಯನಿಕಗಳ ಇರುವಿಕೆಯನ್ನು ಪರಿಶೀಲಿಸಿ ಕಚ್ಚುತ್ತವೆ! ಜೊತೆಗೆ ಕಚ್ಚಿದ ಜಾಗದಲ್ಲಿ ಉಂಟಾಗುವ ನೆವೆ ತಿಂಗಳುಗಳ ಕಾಲ ಇರುತ್ತದೆ.  ನಮ್ಮೆಲ್ಲಾ ಗೆಳೆಯರು ತಮ್ಮ ತಮ್ಮ ಅಂಗಾಗಳ ಸಂಶೋಧನೆಗಿಳಿದರು! ಪುಣ್ಯಕ್ಕೆ ನನಗೊಂದು ಕಚ್ಚಲೇ ಇಲ್ಲ!!



            ಈ ವಿಶಿಷ್ಟ ಶಿಖರದ ನೆತ್ತಿಗೇರುವ ಬಯಕೆಯೊಂದು ಮಳೆಯೊಂದಿಗೆ ಬೆರೆತು, ನನ್ನ ನೂರಾರು ಸೋಲುಗಳ ಎನ್ ಸೈಕ್ಲೋಪಿಡಿಯಾದೊಳಗೆ ಸೇರಿ ಕರಗಿ ಹೋಯಿತು. ಮತ್ತೊಮ್ಮೆ ನೆತ್ತಿಯಲಿ ವಿಜಯದ ನಗೆಯ ನೆಡಬೇಕು. ಎತ್ತಿನ ಭುಜದ ಕನಸಿಗೆ ಬಸಿರಾಗುವ ಬಯಕೆಯೊಂದನ್ನು ಮನಸ್ಸು ಸದಾ ಹೆರುತ್ತಲೇ ಇರುತ್ತದೆ. ಕಾಲು ನೆಟ್ಟಗಿದ್ದರೆ ಒಮ್ಮೆ ಹತ್ತಿ ಬರಬೇಕು.


Saturday, February 28, 2026

ನಾಲಿಗೆ ಹೊರಳದ ನಾಡಿನಲ್ಲಿ ಮೂರು ದಿನ…

        

 

 ಈಶಾನ್ಯ ಭಾರತದ ಶಿಲ್ಲಾಂಗನ ಸುತ್ತಲಿನ ಪ್ರವಾಸಿ ತಾಣಗಳನ್ನು ಕಣ್ಣು ತುಂಬಿಕೊಳ್ಳುವ ಕನಸಿನೊಂದಿಗೆ ಹೊರಟು ನಿಂತಿದ್ದೆ. ಅದೆಷ್ಟೇ ಪ್ರಯತ್ನ ಪಟ್ಟರೂ ಇಲ್ಲಿನ ಊರುಗಳ ಹೆಸರುಗಳನ್ನು ಹೇಳಲಾಗದೇ ಸೋಲೊಪ್ಪಿಕೊಂಡಿದ್ದೆ. ನಾಲಗೆ ಹೊರಳದ ನಾಡು!

 

ಮುನ್ನುಡಿ


32 ಉಷ್ಣದ ಊರಿಂದ 6-7 ತಂಪಿನ ಊರಿಗೆ ಬಂದಾಗ ದೇಹ ಮುದುರಿತ್ತು. ಗೌಹಾಟಿಯ ಗೌಜಿನಲ್ಲೂ ಸ್ಥಳೀಯ ಸೀರೆ ತೊಟ್ಟ ಸೊಗಸುಗಾತಿಯರು ವ್ಯವಹಾರಕ್ಕಿಳಿದಿದ್ದರು. ಇವರನ್ನೆಲ್ಲ ನೋಡುತ್ತಾ ಶಿಲ್ಲಾಂಗ್ಗೆ ಬಂದಾಗ ರಾತ್ರಿ 7 ಗಂಟೆ. ಇಲ್ಲಿಂದ ರಾಜ್ಯ ರಸ್ತೆ ಸಾರಿಗೆ ಹಾಗೂ ಟ್ಯಾಕ್ಸಿ ವ್ಯವಸ್ಥೆ ಶಿಲ್ಲಾಂಗಿಗಿದೆ.

ಸಂಜೆ ಚಹಾ ಹೀರಲು ನಿಲ್ಲಿಸಿದ ಅಂಗಡಿಯಲಿ ಸಾಲು ಸಾಲು ಮೀನು, ಏಡಿ, ಸಿಗಡಿಗಳ ಉಪ್ಪಿನಕಾಯಿ ನೋಡಿದ್ದೇ ಗೆಳೆಯ ನಾಗರಾಜ ಉಸುರಿದ ಬಿಟ್ಟರೆ ಮನುಷ್ಯರನ್ನು ಹುರಿದು ಉಪ್ಪಿನಕಾಯಿ ಮಾಡ್ತಾರೆ. ಇವರು ಗೆಳೆಯರ ನಡುವೆ ನಗುವಿನಲೆ ಉಕ್ಕಿತು. ಸಿಕ್ಕಿದ್ದನ್ನೆಲ್ಲಾ ಉಪ್ಪಿನಕಾಯಿ ಮಾಡಿದ್ದರು! ನಮ್ಮೂರಿನ ಉಪ್ಪಿನಕಾಯಿ ನೆನಪಾಯಿತು. ಕ್ಷಣ ಮಾತ್ರ ಅಯ್ಯೋ ಶಿವನೇ ಎಂತಹ ಲೋಕಕ್ಕೆ ಕಾಲಿಟ್ಟೆವಲ್ಲವೆಂಬ ಆತಂಕವೂ ಕಾಡಿತು. ಊಟಕ್ಕೆ ಕುಳಿತಾಗ ತಟ್ಟೆಗೆ ಬಂದು ಬಿದ್ದ ದೊಡ್ಡ ದೊಡ್ಡ ಮುಸುಂಬಿ ಹೋಳುಗಳನ್ನು ಕಂಡು ಊಟದ ಜೊತೆಗೇಕೆ ಮುಸುಂಬಿ ಎಂದು ಚಕಿತಗೊಂಡಿದ್ದೆ. ಮೂಸಿ ನೋಡಿದರೆ ಲಿಂಬೆಯ ಪರಿಮಳ! ಪರಿಚಾರಕನಲ್ಲಿ ವಿಚಾರಿಸಿದರೆ ಅದು ಮುಸುಂಬಿಯಲ್ಲಾ ಲಿಂಬೆ ಎನಬೇಕೆ? ಮೂಕವಿಸ್ಮಿತನಾಗಿದ್ದೆ. ದಾಲ್ ಅನ್ನದೊಂದಿಗೆ ಲಿಂಬೆಯ ರಸ ಬೆರಸಿ ಉಂಡರೆ ಬಲ್ಲವನೇ ಬಲ್ಲ ಇದರ ರುಚಿ!




 


ನಾಲಿಗೆ ಹೊರಳದ ನಾಡಿನ ಕತೆಗಳಿಗೆ ಕಿವಿಯಾಗೋಣ ಬನ್ನಿ, ಮೇಘಾಲಯದ ಗೆಸ್ಟ್ ಹೌಸ್ನಲ್ಲಿ ಬಂದಿಳಿದಾಗ ತಂದಿರಿಸಿದ ರಾಶಿ ಚೀನಿಕುಂಬಳ ಕಾಯಿಗಳ ಸ್ವಾಗತ! ನನ್ನ ಪರಮ ವೈರಿಚೀನಿಗುಂಬಳಕಾಯಿ ನೆನೆದು ನಮ್ಮನ್ನು ಓಡಿಸಲೇ ಇದನ್ನು ಇಷ್ಟು ರಾಶಿ ಹಾಕಿಕೊಂಡಿದ್ದಾರೆ ಎಂದುಕೊAಡೆ. ನಾಗರಜನ ಗೆಳತಿಯ ಮನೆಯಲ್ಲಿ ನಮಗೆ ದಿನ ರಾತ್ರಿಯ ವಿಶೇಷ ಭೋಜನ ವ್ಯವಸ್ಥೆ ಮಾಡಿದ್ದರಿಂದ ಒಪ್ಪತ್ತಿನ ಮಟ್ಟಿಗಾದ ರೂಚೀನಿ ಕುಂಬಳದಿA ಬಿಡುಗಡೆ ದೊರಕಿತ್ತು!! ಬದುಕಿದೆಯಾ ಬಡಜೀವವೇ! ಅಲ್ಲಿಂದ ಹೊರಟ ನಮ್ಮ ಸವಾರಿ ಸೇರಿದ್ದು ಗೆಳತಿ ಜೋಯ್ಸ್ ಮನೆಗೆ.


ನಾಲಿಗೆ ಹೊರಳದ ನಾಡಿನ ಕತೆಗಳಿಗೆ ಕಿವಿಯಾಗೋಣ ಬನ್ನಿ, ಮೇಘಾಲಯದ ಗೆಸ್ಟ್ ಹೌಸ್ನಲ್ಲಿ ಬಂದಿಳಿದಾಗ ತಂದಿರಿಸಿದ ರಾಶಿ ಚೀನಿಕುಂಬಳ ಕಾಯಿಗಳ ಸ್ವಾಗತ! ನನ್ನ ಪರಮ ವೈರಿಚೀನಿಗುಂಬಳಕಾಯಿ ನೆನೆದು ನಮ್ಮನ್ನು ಓಡಿಸಲೇ ಇದನ್ನು ಇಷ್ಟು ರಾಶಿ ಹಾಕಿಕೊಂಡಿದ್ದಾರೆ ಎಂದುಕೊAಡೆ. ನಾಗರಜನ ಗೆಳತಿಯ ಮನೆಯಲ್ಲಿ ನಮಗೆ ದಿನ ರಾತ್ರಿಯ ವಿಶೇಷ ಭೋಜನ ವ್ಯವಸ್ಥೆ ಮಾಡಿದ್ದರಿಂದ ಒಪ್ಪತ್ತಿನ ಮಟ್ಟಿಗಾದ ರೂಚೀನಿ ಕುಂಬಳದಿA ಬಿಡುಗಡೆ ದೊರಕಿತ್ತು!! ಬದುಕಿದೆಯಾ ಬಡಜೀವವೇ! ಅಲ್ಲಿಂದ ಹೊರಟ ನಮ್ಮ ಸವಾರಿ ಸೇರಿದ್ದು ಗೆಳತಿ ಜೋಯ್ಸ್ ಮನೆಗೆ.

 

ವಿಶೇಷ 'ಖಾಸಿ'ಅಡುಗೆ ಗೆಳತಿ ಜೋಯ್ಸ್ ಅವರ ಮನೆಯಲ್ಲಿ ಒಣಗಿದ ಬೆಳ್ಳುಳ್ಳಿ ಮಿಶ್ರಿತ ಹಸಿ ಮೂಲಂಗಿಯ ಪಲ್ಯ, ಹುದುಗು ಬರಿಸಿದ ಬೀನ್ಸ್ನ ವಿಚಿತ್ರ ಚಟ್ಣಿ, ಬೇಯಿಸಿದ ಸಾಸಿವೆ ಎಲೆ, ಜೀವಮಾನದಲಿ ಒಮ್ಮೆಯೂ ಸವಿಯದ ಅಮೃತ ರುಚಿಯ ಐಸ್ಕ್ರೀಮ್ ಮೊಸರು, ಭಿನ್ನ ರುಚಿಯ ಅನ್ನ ಹೀಗೆ ವಿವಿಧ ಖಾಸಿ

ಜನರ ಅಡುಗೆಯ ಖಾಸಗಿಯೂಟ. ಮರೆಯಲಾಗದ ಸವಿಯೂಟ. ಅವರೇ ಬೆಳೆದ ಅಕ್ಕಿಯಿಂದ ವಿಶಿಷ್ಟ ರುಚಿಯ ಅನ್ನ ಬಡಿಸಿದ್ದರು. ತಟ್ಟೆಗೆ ಬೀಳುತ್ತಲೇ ಘಮ್ ಎನ್ನುವ ಪರಿಮಳ. ಎಲ್ಲವೂ ಹೊಸತು. ಅವರಮ್ಮನ ಆತಿಥ್ಯಕ್ಕೆ ಸೋತು ಹೋದೆವು. ಭಿನ್ನರುಚಿಯ ಊಟವೊಂದು ನನ್ನ ದಿನಚರಿಯಲ್ಲಿ ದಾಖಲಾಯಿತು. ನಾಳೆಯ ಚೆರ್ರಿಬ್ಲಾಸಂ ಹಬ್ಬಕ್ಕೆ ಎಲ್ಲಾ ಗೆಳೆಯರು ಹೊರಟು ನಿಂತಿದ್ದರು. ಹಗಲಿಡೀಸೂಟಿ! ಹಾಗಾಗಿ ನಾನೊಬ್ಬನೇ ಊರು ತಿರುಗಲು ಹೊರಟೆ.


ನಾವಲ್ಲಿಗೆ ಕಾಲಿಟ್ಟಾಗ ಚಳಿಗಾಲ ಕಾಲಿಟ್ಟಿತ್ತು. ಅಸಾಧ್ಯ ಚಳಿ. ಮೈ ಮನಸು ಮುದುರಿತ್ತು. ಪುನಃ ಗೆಸ್ಟ್ ಹೌಸ್ಗೆ ಬಂದು ಮಲಗಿದೆವು. ಮುಂದಿನ ಮುಂಜಾನೆಯ ವಿಹಾರದ ಕನಸು ಹೊದ್ದು ಮಲಗಿದೆ.


    ಸೋಹ್ರಾದಿಂದ ಮೌಸ್ವಾಮಿನತ್ತ…….

 ಹೇಗೆ ಗುಹೆಯ ಹೆಸರನ್ನು ಉಚ್ಚರಿಸಬೇಕೆಂದು ಇನ್ನೂ ಗೊಂದಲದಲ್ಲಿರುವೆ. ಮುಂಜಾನೆ ಮುಸುಕಿದ ಮೋಡಗಳ ಮುತ್ತಿಡುತ್ತಾ ಹೆದ್ದಾರಿಯಲಿ ಸಾಗಿತ್ತು ನಮ್ಮ ಕಾರು. ನಡುವೆಲ್ಲೂ ನಿಲ್ಲಿಸಿ ಪರೋಟ, ವಡೆತಿಂದು, ಚಹಾ ಹೀರಿ ಹೊರಟರೂ ಹೋಗದ ಮಂಜು. ಹಾಗಾಗಿ ಹೆಸರು ಮೇಘಾಲಯ. 10-12 ಡಿಗ್ರಿ ಉಷ್ಣಾಂಶ. ಗೆಳೆಯನಂತಹ ಚಾಲಕ. ಚೆರಿ ಹೂವರಳಿ ನಿಂತ ಹಾದಿಯಲಿ ಹೂ ನುಜ್ಜು ಗುಜ್ಜಾಗ ದಿರಲೆಂದು 'ಹಗುರಹೋಗು ಮರಾಯ.' ಎಂದೆ. ಹುಳುಕಾದ ಹಲ್ಲುತೋರಿಸುತ್ತದೇಶಾವರಿ ನಗೆ

ನಕ್ಕ. ಬಹುಶಃ ಆತನಿಗೆ ನನ್ನ ಭಾಷೆ ತಿಳಿಲಿಲ್ಲವೋ ಏನೋ. ಹಾಗೆ ನೊ ಕಲಿಕೈ ಜಲಧಾರೆ ತೋರಿಸಿಕೊಂಡು, ಅದರ ಕುರಿತು ಲೈವ್ ಕಾಮೆಂಟರಿ ಕೊಡುತ್ತಾ ಸುಣ್ಣದ ಕಲ್ಲಿನ ಗುಹೆಗಳತ್ತ ಕಾರು
ಹೊರಳಿಸಿದ. ಬಟಾ ಬಯಲಿನ ನಡುವೆ ಹೆಬ್ಬಾವಿನಂತೆ ಮಲಗಿದ ದಾರಿ. ಬೆಟ್ಟದ ನಡುತಿರುವಿನಲ್ಲಿ ಕಂಡ ಒಂದು ಹೋಟೆಲ್ ಬಿಟ್ಟರೆ ದಾರಿ ಎಲ್ಲೆಲ್ಲೂ ನಿರ್ಮಾನುಶ! ಬುಟ್ಟಿ ಹೊತ್ತು ಹೊರಟ ಒಂದಿಬ್ಬರು ಬಿಟ್ಟರೆ ಬೆಟ್ಟವೆಲ್ಲಾ ಹುಲ್ಲ ಬಯಲು. ಈಗಲ್ಲಿ ನೂರಾರು ಹೋಂ ಸ್ಟೇಗಳ ಆರ್ಭಟ. ನೀರ ಅನುರಣನದ ದಾರಿಯಲ್ಲಿ ಹೋಂಸ್ಟೇಗಳ ಗೌಜಿ. ಅಂದು ಅನನ್ಯ ಅನುಭವ ನೀಡಿದ್ದ ಜಲಪಾತದ ಸನಿಹ ಮಾನವ ಇರುವಿನ ಕುರುಹು ಇರಿಸು ಮುರಿಸು ಉಂಟುಮಾಡಿತ್ತು.

ಜನಜೀವನ

ಪ್ರವಾಸೋಧ್ಯಮ, ಸುಣ್ಣದಕಲ್ಲು ಮತ್ತು ಮಸಾಲೆ ಪದಾರ್ಥಗಳೇ ಇವರ ಜೀವನ ಆಧಾರ. ಸುಣ್ಣದ ಕಲ್ಲಿನ ನೂರಾರು ಗುಹೆಗಳು ನಿಮಗೆ ಶಿಲ್ಲಾಂಗಿನಿA ಚಿರಾಪುಂಜಿಯೆಡೆಗೆ ಹೊರಟಾಗ ಕಾಣಸಿಗುತ್ತದೆ. ಇನ್ನು ಕಣಿವೆಯಲ್ಲಿ ವಾಸಿಸುವವರು ಸ್ವಲ್ವ ಕಿತ್ತಳೆ, ಶುಂಠಿ ಮತ್ತು ಕಾಳುಮೆಣಸು ಬೆಳೆದುಕೊಳ್ಳುತ್ತಾರೆ



ಕಾಡುತ್ಪತ್ತಿ ಸಂಗ್ರಹಿಸುತ್ತಾರೆ. ಇಲ್ಲಿನ ಕಿತ್ತಳೆ ಬಲು ಹುಳಿ. ಇವರ ಇನ್ನೊಂದು ಆದಾಯದ ಮೂಲ ಭತ್ತ ಮತ್ತು ಬಿದಿರು. ಇವರ ಬಿದಿರಿನ ನಾಜೂಕು ನಮಗೆ ಅಸಾಧ್ಯ, ಅಂಟು ಬಳಸದೆಯೇ ಭತ್ತದ ಬುಟ್ಟಿಗಳ ಹೆಣೆಯುವ ನೈಪುಣ್ಯದಲ್ಲಿ ಅಸಾಧ್ಯ ಕಲೆಗಾರಿಕೆ. ವಿಮಾನ ಮುಂತಾದ ಕಡೆ ಎಳೆದಾಡಿದರೂ ಚೂರೂ ಕೊಸರದೇ ಉಳಿದಿತ್ತು ನಾಕೊಂಡ ಭೆತ್ತದ ಪುಟಾಣಿ ಬುಟ್ಟಿ. ಎಲ್ಲಾ ಕೆಲಸಗಳಲ್ಲೂ ಸಿದ್ದ ಹಸ್ತರೂ ಕೂಡ. ನಮ್ಮ ಸ್ನೇಹಿತನ ಹರಿದ ಚಪ್ಪಲಿಯೊಂದನ್ನು ಕ್ಷಣಾರ್ಧದಲ್ಲೆ ಹೊಲಿದು ಕೊಟ್ಟನೊಬ್ಬ. ಹೆಂಗಸರೇ ಹೆಚ್ಚು ದುಡಿಯುವವರು. ಮಂಜಿನಿAದಾಗಿ ಅಲ್ಲಲ್ಲಿ ಚಳಿ ಕಾಯಿಸುವ ಜನ. ಸುಣ್ಣದ ಕಲ್ಲನ್ನು ಆರಿಸಿ ಆರಿಸಿ ಬೃಹತ್ ಗುಹೆಗಳು ನುಂಗುವAತೆ ದಾರಿಯುದ್ದಕ್ಕೂ ಬಾಯ್ದೆರೆದಿದ್ದವು. ಎಲ್ಲವೂ ಸೊಹ್ರಾದ ಸಿಮೆಂಟ್ ಕಾರ್ಖಾನೆಗೆ ಹೋಗುತಲಿತ್ತು.



ಗುಹೆ ಎದುರಿಗೆ

ಸೊಹ್ರಾದಿಂದ ಹೊರಟು ಊಟ ಮಾಡಿ ನಡು

ಮಧ್ಯಾಹ್ನಕ್ಕೆ ಪಾರ್ಕಿಂಗ್ ಜಾಗದಲ್ಲಿದ್ದ್ದೆವು. ಗುಹೆ ತಲುಪುವ ದಾರಿಯಂತೂ ಅಮೋಘ. ನೂರಾರುಫರ್ನ್ಗಳು, ಆರ್ಕಿಡ್ಗಳು ಬಂಡೆಗಳ ಮೇಲೆ ಅರಳಿನಿಂತಿದ್ದವು. ಸಿಕ್ಕ ಚಿಕ್ಕ ಬಿರುಕಿನಲ್ಲೇ ಬೇರು ಬಿಟ್ಟು ಬೆಳೆವ ಇವುಗಳ ಅದಮ್ಯಚೇತಕೆ ಬೆರಗಾದೆ! ದೂರದೂರದಿಂದ ಹಕ್ಕಿ ಉಲಿಗು ಹೆದಾರಿಯಲ್ಲೇ ಉಳಿವಂತೆ ಮಾಡುತ್ತಿತ್ತು. ಹತ್ತಾರು ಜೇಡಗಳು ಮರಗಳ ಮೇಲೆ, ಬಂಡೆಗಳ ಮೇಲೆ ಸಂಸಾರ
ಹೂಡಿದ್ದವು! ಇಂತಿಪ್ಪ ದಾರಿ ಸವೆಸಿ ನಡೆದರೆ ಗುಹೆ ಎದುರಿಗಿರುತ್ತೀರಿ.








 ನಾನಲ್ಲಿಗೆ ಅಡಿಇಟ್ಟಾಗ 'ಮೆ ನಹಿ ಆಂವೂಗಿ'(ನಾ ಬರೋದಿಲ್ಲ) ಎಂಬ ಕೂಗು ಗುಹೆಎದುರಿಂದ ಕೇಳಿ ಬರುತಲಿತ್ತು. ಎದೆ ನಡುಗಿಸುವ ಗುಹಾದ್ವಾರದೆದುರು ಅನೇಕ ಹೆಂಗಸರು ಒಳ ಹೋಗಲು ಹೆದರಿ ಹೀಂದೇಟು ಹಾಕುತ್ತಿದ್ದರು. ಅವರಗಂಡAದಿರು ಅವರನ್ನು ಒಳಹೋಗಲು ಒತ್ತಾಯಿಸುತ್ತಿದ್ದರು. ಮುದುಕನೊಬ್ಬನ ಬಾಯೊಳಗೆನು ಸುಳಿದಂತೆ ಕಂಡುಬರುವ ದ್ವಾರ ಎಂತವರನ್ನೂ ಭಯಗೊಳಿಸುವುದು. ಯಾರದೋ ಜೀರ್ಣನಾಳದೊಳಗೆ ಮೂಗು ತೂರಿಸಿದ ಅನುಭವ!! ಮತ್ತೆ ಹೇಗೆ ಒಳಹೊಕ್ಕಾರು ಅವರೆಲ್ಲ. ಪಾಪ. ಕುಸಿದು ಬಿದ್ದರೆ ಬದುಕಿನ ಅಧ್ಯಾಯ ಮುಗಿದಂತೆ. ಬರೋಬ್ಬರಿ 6.5 ಕಿಲೋ ಮೀಟರ್ ಬಾಯ್ದೆರೆದ ಭಯಾನಕ ಗುಹೆ. ಕೆಲವೆಡೆತೆವಳುತ್ತಾ ಸಾಗಬೇಕು. ಸಣ್ಣ ಝರಿಯೊಂದು ಗುಹೆಯೊಳಗೇ ಹಾದು ಹೋಗಿತ್ತು. ಗೋಡೆಗಳ ಮೇಲೆಲ್ಲಾ ಸುಣ್ಣದಕಲ್ಲಿನ ಚಿತ್ತಾರ.


  ಗುಹೆಯೊಳಗಿನ ನೆಲ ಸವೆದು ಜಾರುವ ಟೈಲ್ಸ್ನಂತಿತ್ತು. ಅನೇಕ ಕಡೆಜಾರಿ ಬೀಳುವಷ್ಟರಲ್ಲಿ ಸುಧಾರಿಸಿಕೊಂಡೆ. ಬಕಾಸುರನಂತೆ ಬಾಯಿ ಕಳೆದ ಗುಹೆ ಕಂಡಾಗ ಶ್ರೀ ಕೃಷ್ಣನ ನೆನಪು. ಗುಹೆಯೊಳಗೆ ಏನುಂಟು ಏನಿಲ್ಲ ತಣ್ಣಗೆ ಹರಿವ ಜಲರಾಶಿ, ಜೀವರಾಶಿ. ಅಪರೂಪದ ಜೇಡಗಳು. ವಿಚಿತ್ರ ವಿನ್ಯಾಸದೊಂದಿಗೆ ತೊಟ್ಟಿಕ್ಕುವ ನೀರು, ಗುಹೆಯೊಳು ಗಂವ್ ಎನ್ನುವ ಕತ್ತಲು. ನೆತ್ತಿ ಸುಡುವ ಬಿಸಿಲಿದ್ದರೂ ಒಳಗೆ ಹವಾನಿಯಂತ್ರಣದಷ್ಟು ತಂಪು.ಯಾರದೋ ಜಿರ್ಣನಾಳದೊಳಗೆ ಜಾರಿಹೋದಂತಹ ಅನುಭವ. ಹೆಬ್ಬಾವಿನ ಹೊಟ್ಟೆ ಸೇರಿದ ಭಾವ. ಯಾರದೋ ಕರುಳಿನೊಳಗೆ ಹೂತು ಹೋದಂತೆ. ಆಹಾರದ ಕಣದಂತೆ ಚಲಿಸುವ ಜನಸಂದಣಿ. ಒಳಾಂಗಣದಲಿ ಅಲ್ಲಲ್ಲಿ ಬೆಳಕಿನ ವ್ಯವಸ್ಥೆ. ಗುಹೆಯಉದ್ದ ಸರಿಸುಮಾರು 6.5 ಕಿ.ಮೀ. ವಿನ್ಯಾಸ ಸುಣ್ಣದ ಕಲ್ಲಿನ ವಿಚಿತ್ರ ವಿನ್ಯಾಸ. ಜೇನುತಟ್ಟಿಯಂತಹ ವಿಭಿನ್ನ ಸಂಯೋಜನೆ. ಬೆಳಕಿಗೆ ಹೊಳೆವ ಕಲ್ಲಿನ ಚೂರುಗಳು. ದನದ ಕೆಚ್ಚಲಿನಾ ಕೃತಿಯ ವಿನ್ಯಾಸವೂ ಉಂಟು. ಹಲಸಿನ ಕಾಯಿಯಂತಹ ನೇತಾಡುವ ಮಣ್ಣ ಹೆಂಟೆಗಳು. ವಿಭಿನ್ನ ವಿನ್ಯಾಸ, ಆಕಾರ. ಹಾವು, ಶಂಕ, ಗದೆ, ರಾಕ್ಷಸ ಆಲದ ಬಿಳಲುಗಳಂತಹ ರಚನೆ. ಹತ್ತು ಹೆಡೆಸರ್ಪ, ಮುದುಕ, ಗಂಟಲಿನ ರಚನೆ, ಹೊಸ ಹೊಸ ವಿನ್ಯಾಸದ ಬಲ್ಬುಗಳಂತಹ ರಚನೆಗಳು, ಒಂದೇ ಎರಡೇ. ನಿಮ್ಮ ಕಲ್ಪನಾಲೋಕದ ವಿಸ್ತಾರ.ಬೀಳುವವೇನೋ ಎಂದು ನಿರುಕಿಸಿ ನಿರುಕಿಸಿ ಸೋತೆ. ಒಂದೂ ಹಿಸಿದು ಬೀಳಲೇ ಇಲ್ಲ. ಆಲದ ಬಿಳಲುಗಳಂತೆ ನೇತಾಡುವ ಸಪೂರ ಗುಹಾ ರಚನೆ. ಇಲ್ಲೆಲ್ಲಾ ನುಸುಳಿ, ತೆವಳಿ ಸಾಗಬೇಕಾದ ಅನಿವಾರ್ಯತೆ. ನಡುವಲ್ಲಿ ವಿಶಾಲವಾಗಿ ಮತ್ತೆ ಕುಗ್ಗಿ ಚಲಿಸಿತ್ತು ಗುಹೆ. ಸಾಕ್ಷಾತ್ ಗಂಟಲಿನಿಂದ ನುಸುಳಿ ಹೊಟ್ಟೆಗೆ ಕಾಲಿಟ್ಟಂತೆ! ಇಲ್ಲಿ ಸುಣ್ಣದ ಕಲ್ಲು ಗುಡ್ಡ ಕುಡಿದ ನೀರಿನೊಂದಿಗೆ ಬೆರೆತನೋಳಿ(ಅಂಟು) ರಸದಂತೆ ಸದಾ ಹರಿಯುತ್ತಲೇ ಇರುತ್ತದೆ. ಕೊನೆಯಲ್ಲಿ ಗುಹೆ ತನ್ನ ಬಾಯಿ ಕಳೆದುನಿಂತಿತ್ತು. ಹೊರಗಿನ ಬಿಸಿಲ ಕೋಲುಗಳು ಗುಹೆಯೊಳಗೆ ನುಗ್ಗಿ ಗುಹೆಯನ್ನು ಚೆಚ್ಚಗೆ ಮಾಡಿ ಹೊರಟು ಹೋಗಿದ್ದವು. ಶ್ರೀ ಕೃಷ್ಣ ಬಾಯಿ ತೆರೆದಂತೆ  ಮೂರು ಪುಟಾಣಿ ದ್ವಾರಗಳು ಇಲ್ಲಿಂದ ತೆರೆದುಕೊಳ್ಳುತ್ತದೆ. ಒಂದರೊಳಗಾದರೂ ನುಗ್ಗಿ ಮತ್ತೊಂದರಿA ಹೊರಬರಬೇಕೆಂಬ ಅದಮ್ಯ ಇಚ್ಚೆಯಾದರೂ ಒಂಟಿಯಾಗಿರುವುದರಿಂದ ಸುಮ್ಮನಾದೆ. ಜೊತೆಗೆ ಇಲ್ಲಿಂದ ಮುಂದೆ ಹೋಗಬಾರದೆಂದು ಸಣ್ಣ ಬೋರ್ಡೊಂದು ನೇತುಹಾಕಿದ್ದರು.



ರಚನೆ

ನೀರೇ ಎಲ್ಲಾ ರಚನೆಗಳ ವಿನ್ಯಾಸಗಾರ! ಸಹಸ್ರಾರು ವರ್ಷಗಳಿಂದ ನೀರು ಗುಹೆಗಳ ಮೂಲಕ ಹರಿದು ಹರಿದು ವಿಚಿತ್ರಗಳು ರಚನೆಯಾಗಿವೆ ಅನ್ನುತ್ತಾರೆ. ಇಲ್ಲಿನ ಲೈಮ್ ಸ್ಟೋನ್ಗಳು ಕರಗಿ ರಚನೆಗಳು ಉಂಟಾಗಿವೆ. ನೀರಿನ ಅದ್ಭುತ ಶಕ್ತಿಯ ನೆನೆದು ಅಚ್ಚರಿಯಾಯಿತು.

 

ಮುಂದಕ್ಕೆ ಪ್ರಕೃತಿ ನಿರ್ಮಿತ' ಲಿಯತ್ ಪ್ರಹಾ' ಎಂಬ ಗುಹೆ 30 ಕಿ.ಮೀ. ಉದ್ದವಿದೆ!' ಎಂದ ನಮ್ಮ ಡ್ರೆöÊವರ್. ಇವುಗಳಲ್ಲಿ ಕೆಲವೊಂದು ಕಡೆ ತೆವಳಿ ಸಾಗಬೇಕಾದ ಅನಿವಾರ್ಯತೆಯಂತೆ. ‘ಗಾರ್ಡನ್ಗುಹೆ ಎಂದು ಕರೆಯಲ್ಪಡುವ ಗುಹೆ ಸುಮಾರು ಕಿ.ಮೀ. ಉದ್ದವಿದೆ ಎಂಬ ಬರ‍್ಡೊಂದನ್ನು ಇಲ್ಲಿ ಕಂಡೆ. ಜೊತೆಗೆ ಗುಹೆಯೊಳಗೆ ಒಂದು ಜಲಪಾತವೂ ಇದೆ! ಇಲ್ಲಿನ ಗುಹೆಗಳು ಅಚ್ಚರಿಗಳ ಮೂಟೆ. ಮೇಘಾಲಯದಲ್ಲಿ ಸುಮಾರು 1950ಕ್ಕೂ ಹೆಚ್ಚು ಗುಹೆಗಳಿವೆ! ವಿಶ್ವ ಪ್ರಸಿದ್ಧ ಮೊದಲ 9 ಗುಹೆಗಳಿರುವುದು ನಮ್ಮ ಮೇಘಾಲಯದಲ್ಲೇ
. ಪ್ರತಿಯೊಂದೂ ಭಿನ್ನ. ಯುತ್ ಹಾಸ್ಟೆಲ್ನವರು ವರ್ಷಂಪ್ರತಿ ಇಲ್ಲಿ ಮೂರು ನಾಲ್ಕು ಗುಹೆ ತೋರಿಸುವ ಕರ‍್ಯಕ್ರಮವೇರ್ಪಡಿಸುತ್ತಾರೆ.




 ಚಿಕ್ಕ ವಯಸ್ಸಿನಲ್ಲೇ ಮೇಘಾಲಯಕ್ಕೆ ಹೋಗಿ ಬರಬೇಕೆಂಬ ಕನಸೊಂದು ಬಹಳ ವರ್ಷಗಳ ನಂತರ ನೆರವೇರಿತು. ಬದುಕಿನ ಬಣ್ಣಕ್ಕೆ ಹೊಸ ಗರಿಯೊಂದು ಸೇರಿತು. ಶಿಲ್ಲಾಂಗ್ ಸನಿಹವೇ ಇರುವ ಗುಹೆಗಳನ್ನು ನೋಡದೆ ಹೋದರೆ ಮೇಘಾಲಯ ಪ್ರವಾಸ ಅಪೂರ್ಣ. ಅರವಾಗುಹೆಗಳನ್ನು ನೋಡದೇ ಹಾಗೆ ವಾಪಾಸು ಬಂದಿದ್ದು ಬೇಸರವೆನಿಸಿದರೂ ಮತ್ತೊಮ್ಮೆ ಬರುವ ಇರಾದೆಯೊಂದಿಗೆ ಅಸ್ಸಾಂನತ್ತ ಹೊರಟು ನಿಂತೆವು. ನಾಲಗೆ ಹೊರಳದ ನಾಡಲ್ಲಿ ತಿರುಗಿ ಬರುವ ಮಜವೇ ಬೇರೆ. ಯಾಕಿನ್ನು ಯೋಚನೆ ಪ್ಯಾಕ್ಪ್ ಹೇಳಿ. ಜೀವಂತ ಸೇತುವೆಗಳೊಂದಿಗೆ ಒಂದು ದಿನ ಕಳೆಯುವ ಆಲೋಚನೆಯೊಂದಿಗೆ ಇಂದಿನ ಪ್ರವಾಸಕ್ಕೆ ನಾವು ಪ್ಯಾಕ್ಪ್ ಹೇಳಿದೆವು.                  

   

ವಾರೆ ನೋಟ

ಸೋಲೆಂಬ ಅಲ್ಪ ವಿರಾಮದ ನಡುವೆ.

  ತೇಜಸ್ವಿಯ ನೆನಪಿಗೆ ನಡೆಸಿದ ಮೂರು ದಿನಗಳ ಕರ‍್ಯಾಗಾರದಲ್ಲಿ ನನ್ನ ಚಿತ್ರ ಪಟ ಕಥನ ಓದಲಿತ್ತು. ಹೇಗೂ ಹೊರಟಿದ್ದೆನಲ್ಲಾ ಎಂದು ಕೊಂಡು ದೇವರ ಮನೆಯಿಂದ ಅನತಿ ದೂರದ ನಾಣ್...